Saturday, July 25, 2026
Homeಜಿಲ್ಲೆಉಡುಪಿ : ಹರ್ ಘರ್ ತಿರಂಗ: ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಮನವಿ.

ಉಡುಪಿ : ಹರ್ ಘರ್ ತಿರಂಗ: ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಮನವಿ.

ಉಡುಪಿ : ಕೇಂದ್ರ ಸರಕಾರದ ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮನವಿ ಮಾಡಿದ್ದಾರೆ.

ಸ್ವಯಂಪ್ರೇರಿತವಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಜನರನ್ನು ಒತ್ತಾಯಿಸಿದ ಅವರು, ಧ್ವಜಾರೋಹಣಕ್ಕೆ ಸಂಬಂಧಿಸಿದ ಎಲ್ಲಾ ನಿಯಮಗಳಿಗೆ ಬದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

ತಾಲೂಕಿನ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅಳವಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಅಭಿಯಾನದ ಯಶಸ್ವಿಗೆ ಶ್ರಮಿಸುವಂತೆ ಮನವಿ ಮಾಡಿದರು.
RELATED ARTICLES

LEAVE A REPLY

Please enter your comment!
Please enter your name here

Most Popular