ಕಡಬ : ಮಂಜೇಶ್ವರ ಮೂಲದ ಯುವತಿಯೋರ್ವಳು ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ಅನ್ಯಮತೀಯ ಯುವಕನ ಜತೆಗಿದ್ದ ಘಟನೆ ನ.27 ರ ಭಾನುವಾರ ಸಂಜೆ ನಡೆದಿದೆ.
ಯುವತಿ ಮುಸ್ಲಿಂ ಯುವಕನ ಸಂಪರ್ಕದಲ್ಲಿದ್ದು, ಪ್ರಸ್ತುತ ಆತ ಕೆಲಸದ ನಿಮಿತ್ತ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ಬಾಡಿಗೆ ಕೊಠಡಿಯಲ್ಲಿದ್ದು, ಅಲ್ಲಿಗೆ ಯುವತಿಯನ್ನು ಬರುವಂತೆ ಹೇಳಿದ್ದ.
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಯುವಕನ ರೂಮ್ ಮಾಡಿಕೊಂಡಿದ್ದ ಸ್ಥಳಕ್ಕೆ ಧಾವಿಸಿದ್ದರು. ಅವರು ಬರುತ್ತಿದ್ದಂತೆ ಯುವಕನು ಯುವತಿಯನ್ನು ಹಿಂಬಾಗಿಲಿನ ಮೂಲಕ ಹೊರಗೆ ಕಳುಹಿಸಿ ಆತನೂ ಅಲ್ಲಿಂದ ಕಾಲ್ಕಿತ್ತಿದ್ದಾನೆ .
ಸ್ಥಳಕ್ಕಾಗಮಿಸಿದ ಕಡಬ ಪೊಲೀಸರು ಯುವತಿಯನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಪೋಷಕರಿಗೆ ಒಪ್ಪಿಸಿದ್ದಾರೆ.