ಕಡಬ : ದ.ಕ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಎಂಬಲ್ಲಿ ಕಾಡಾನೆ ದಾಳಿಗೆ ಯುವತಿ ಸಹಿತ ಸೇರಿ ಇಬ್ಬರು ಸಾವನಪ್ಪಿದ್ದಾರೆ.
ಆನೆ ದಾಳಿಗೆ ಮೃತಪಟ್ಟವರು ರಂಜಿತಾ ಹಾಗೂ ರಮೇಶ್ ರೈ ಎಂದು ತಿಳಿಯಲಾಗಿದೆ.
ರಂಜೀತ ಸ್ಥಳೀಯ ಪೇರಡ್ಕ ಹಾಲು ಸೊಸೈಟಿಯ ಸಿಬ್ಬಂದಿ.
ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.
ಇದೇ ವೇಳೆ ಸ್ಥಳದಲ್ಲಿದ್ದ ರಮೇಶ್ ರೈ ಎಂಬವರ ಮೇಲೂ ದಾಳಿ ನಡೆಸಿದೆ.
ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ರಂಜಿತಾ ನೆಲ್ಯಾಡಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.