ಕಡಬ : ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ನಲ್ಲಿ ಸೋಮವಾರ ಬೆಳಗ್ಗೆ ಚಲಿಸುತ್ತಿದ್ದ ಟಾಟಾ ಸುಮೋ ವಾಹನ ಮತ್ತು ರಸ್ತೆ ಬದಿಯ ಅಂಗಡಿಯ ಮೇಲೆ ಬೃಹತ್ ಮರವೊಂದು ಬಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸುಬ್ರಹ್ಮಣ್ಯ ಕಡೆಯಿಂದ ನೆಟ್ಟಣಕ್ಕೆ ತೆರಳುತ್ತಿದ್ದ ಟಾಟಾ ಸುಮೋ ಮರ ಹಾಗೂ ರಸ್ತೆ ಬದಿಯ ಪೆಟ್ಟಿ ಅಂಗಡಿ ಮೇಲೆ ಬಿದ್ದಿದೆ. ಗಾಯಗೊಂಡಿರುವ ವಾಹನ ಚಾಲಕ ಬಿಳಿನೆಲೆಯ ಶೇಖರ್ ಹಾಗೂ ಮತ್ತೋರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


