Friday, March 28, 2025
Flats for sale
Homeರಾಜ್ಯಕೊಪ್ಪಳ ; ಜಮೀನಿನಲ್ಲಿ ದನ ಮೇಯಿಸಿದ ದಲಿತ ಮಹಿಳೆಯ ಮೇಲೆ ಹಲ್ಲೆ,ಆರೋಪಿಯ ಬಂಧನ.

ಕೊಪ್ಪಳ ; ಜಮೀನಿನಲ್ಲಿ ದನ ಮೇಯಿಸಿದ ದಲಿತ ಮಹಿಳೆಯ ಮೇಲೆ ಹಲ್ಲೆ,ಆರೋಪಿಯ ಬಂಧನ.

ಕೊಪ್ಪಳ ; ಇತ್ತೀಚೆಗೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ದನ ಮೇಯಿಸಿದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಫೆ.3ರಂದು ಈ ಘಟನೆ ನಡೆದಿದ್ದು, ಗುರುವಾರ ರಾತ್ರಿ ಶೋಬಾ ಎಂಬುವರ ಹಸು ಅಮರೇಶ ಕುಂಬಾರ್ ಎಂಬುವರ ಕೃಷಿ ಕ್ಷೇತ್ರಕ್ಕೆ ನುಗ್ಗಿತ್ತು. ಇದರಿಂದ ಸಿಟ್ಟಿಗೆದ್ದ ಅಮರೇಶ್ ಹಸುವನ್ನು ಮನೆ ಮುಂದೆ ಕಟ್ಟಿ ಹಾಕಿದ್ದರು.

ಶೋಬಾ ತನ್ನ ಹಸುವನ್ನು ಬಿಡಿಸಿಕೊಳ್ಳಲು ಅಮರೇಶ್ ಮನೆಗೆ ಬಂದಾಗ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕನಕಗಿರಿ ಪೊಲೀಸರು ಅಮರೇಶನನ್ನು ಐಪಿಸಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 1989 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಅಮರೇಶ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಂತರ ಜಿಲ್ಲಾ ಅಧಿಕಾರಿಗಳು ಶೋಬಾ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular