Friday, March 13, 2026
Flats for sale
Homeಜಿಲ್ಲೆಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.

ಪುತ್ತೂರು : ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ.

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಲ್ಲೆಯಿಂದ ಗಾಯಗೊಂಡ ಯುವಕ ಪ್ರವೀಣ್ ಆಚಾರ್ಯ ಕೆಲವು ತಿಂಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು ಎಂದು ಮೂಲಗಳು ತಿಳಿಸಿವೆ.

ಆರೋಪಿಯನ್ನು ಅದೇ ಪ್ರದೇಶದ ಪ್ರವೀಣ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಈ ಹಿಂದೆ ಬಿಜೆಪಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಚಾರವಾಗಿ ಮಂಗಳವಾರ ಆಚಾರ್ಯ ಅವರೊಂದಿಗೆ ಪ್ರವೀಣ್ ಜಗಳ ತೆಗೆದು ನಂತರ ಅವರ ನಿವಾಸದಲ್ಲಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular