ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಕೈಕಂಬದಲ್ಲಿ ಭಾನುವಾರ ಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ 32 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಅವರ ಸ್ನೇಹಿತ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಆಲಡ್ಕ ನಿವಾಸಿ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್ ಕೈಕಂಬದ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ತನ್ವೀರ್ಗೆ ಸಹಾಯ ಮಾಡಲು ಮುಂದಾಗಿದ್ದ. ಸರಿಸುಮಾರು 5:30 ಕ್ಕೆ, ಅಶ್ರಫ್ ತನ್ನ ಕೆಲಸಕ್ಕೆ ತನ್ವೀರ್ ಜೊತೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ .
ಅಪಘಾತದ ಪರಿಣಾಮದಿಂದ ಅಶ್ರಫ್ ಮತ್ತು ತನ್ವೀರ್ ಇಬ್ಬರಿಗೂ ಗಾಯಗೊಂಡಿತ್ತು,ತೀವ್ರವಾಗಿ ಗಾಯಗೊಂಡ ಅಶ್ರಫ್ ಅವರನ್ನು ಮಂಗಳೂರಿನ ಯೂನಿಟಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ .
ಕೈಕಂಬದ ಸಗಟು ತರಕಾರಿ ಅಂಗಡಿಯ ಪರಿಸರದಲ್ಲಿ ಈ ಹಿಂದೆ ಹಲವಾರು ಅಪಘಾತಗಳು ಸಂಭವಿಸಿದ್ದವು. ಈ ಇತ್ತೀಚಿನ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ತಾತ್ಕಾಲಿಕ ಸಂಚಾರ ತಡೆಗೆ ಪ್ರೇರೇಪಿಸಿದೆ. ಪರಿಸ್ಥಿತಿ ತಿಳಿಗೊಳಿಸಿದ ಸಂಚಾರಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಆಕ್ರೋಶಗೊಂಡ ಜನರನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


