ಬೆಂಗಳೂರು : ಇಂದಿನಿಂದ ಮೇ 27 ರವರೆಗೆ ಕೇರಳ, ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 5 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ,ಯಾಣಂ , ರಾಯಲಸೀಮಾ, ತೆಲಂಗಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಮೇ 27 ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ವಾರ ಗುಜರಾತ್, ಕೊಂಕಣ, ಗೋವಾ, ಕರ್ನಾಟಕ ಮತ್ತು ಕೇರಳ ಸೇರಿದಂತೆ ಪಶ್ಚಿಮ ಕರಾವಳಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ, ಇಂದಿನಿಂದ ಮೇ 25 ರವರೆಗೆ ರಾಜಸ್ಥಾನದಲ್ಲಿ ತೀವ್ರ ಶಾಖದ ಅಲೆಯ ಮುನ್ಸೂಚನೆ ಇದೆ. ಇದರೊಂದಿಗೆ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ ಇಂದು ಮತ್ತು ನಾಳೆ ಶಾಖದ ಅಲೆ ಮುಂದುವರಿಯುವ ನಿರೀಕ್ಷೆಯಿದೆ.
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನ ಐದಾರು ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮೇ 28ರ ತನಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಹೀಗಾಗಿ ಈ ಜಿಲ್ಲೆಗಳಿಗೆ ಇಂದಿನಿಂದ ಮೆ.26ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಂಕಣ , ಗೋವಾ, ಮಧ್ಯ ಮಹಾರಾಷ್ಟç, ಮರಾಠವಾಡಾದಲ್ಲಿ ಇಂದಿನಿಂದ ಭಾನುವಾರದವರೆಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮೇ 28 ರವರೆಗೆ ಕೇರಳ ಮತ್ತು ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಪರ್ಯಾಯ ದ್ವೀಪದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (ಗಂಟೆಗೆ 40-50 ಕಿಲೋಮೀಟರ್) ಇರುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ.ಧಾರಾಕಾರ ಮಳೆ ಹಿನ್ನೆಲೆ ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತ ಮೀನುಗಾರಿಕೆಯನ್ನ ಸಂಪೂರ್ಣ ನಿಷೇಧಿಸಿದೆ. ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೋಟುಗಳು ವಾಪಸು ಬರುತ್ತಿವೆ. ಈಗಾಗಲೇ ಕೆಲವು ದಡದಲ್ಲಿ ಲಂಗರು ಹಾಕಿವೆ. ಮೀನುಗಾರಿಕಾ ಋತು ತಿಂಗಳ ಅಂತ್ಯದವರೆಗೂ ಇತ್ತು ಆದ್ರೆ ಮಳೆಯಿಂದಾಗಿ ಅವಧಿಗೂ ಮುನ್ನ ಮೀನುಗಾರಿಕಾ ಋತು ಅಂತ್ಯಗೊಂಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಕರ್ನಾಟಕ-ಗೋವಾ ಕರಾವಳಿಯ ಪೂರ್ವಮಧ್ಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ ವಾಯುವ್ಯ ರಾಜ್ಯಗಳಲ್ಲಿ ಶಾಖದ ಅಲೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ತಿಳಿಸಿದೆ.


