Saturday, March 14, 2026
Flats for sale
Homeರಾಜಕೀಯಬೆಂಗಳೂರು : 20ಕ್ಕೂ ಅಧಿಕ ಶಾಸಕರನ್ನು ಒಟ್ಟುಗೂಡಿಸಿ ಭಾರೀ ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ.

ಬೆಂಗಳೂರು : 20ಕ್ಕೂ ಅಧಿಕ ಶಾಸಕರನ್ನು ಒಟ್ಟುಗೂಡಿಸಿ ಭಾರೀ ಸಂಚಲನ ಮೂಡಿಸಿದ ಸತೀಶ್ ಜಾರಕಿಹೊಳಿ.

ಬೆಂಗಳೂರು: ಮೈಸೂರು ದಸರಾ ನೆಪದಲ್ಲಿ 20ಕ್ಕೂ ಹೆಚ್ಚು ಶಾಸಕರೊಂದಿಗೆ ಮೈಸೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರ ನಡೆ ಇದೀಗ ಕಾಂಗ್ರೆಸ್ ನಲ್ಲಿ ಭಾರೀ ಸಂಚಲನ ಮೂಡಿಸಿದೆ. ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಜಿಲ್ಲೆಯ ಶಾಸಕರ ಜೊತೆ ತೆರಳಲು ಚಿಂತನೆ ನಡೆಸಿದ್ದಾರೆ. ಶಾಸಕರೆಲ್ಲರೂ ಒಗ್ಗಟ್ಟಾಗಿ ದಸರಾಗೆ ಮೈಸೂರಿಗೆ ತೆರಳಲು ಸಿದ್ಧತೆ ನಡೆಸಿದ್ದರು. ಅವರನ್ನು ಕರೆದೊಯ್ಯಲು ಬಸ್ ಕೂಡ ಸಿದ್ಧವಾಗಿತ್ತು. ಆದರೆ ಈ ವಿಷಯ ತಿಳಿದ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ಈ ವೇಳೆ 20ಕ್ಕೂ ಹೆಚ್ಚು ಶಾಸಕರು ಒಂದಾಗಬಾರದು, ಕೂಡಲೇ ರದ್ದು ಮಾಡುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ಈ ವೇಳೆ ಸತೀಶ್ ಜಾರಕಿಹೊಳಿ ಅವರಿಗೆ ಹೈಕಮಾಂಡ್ ನಾಯಕರಿಂದ ಬಸ್‌ನಲ್ಲಿ ಶಾಸಕರನ್ನು ಒಟ್ಟಿಗೆ ಕರೆದುಕೊಂಡು ಹೋದರೆ ವಿಪಕ್ಷಗಳಿಗೆ ನಾವೇ ಊಟ ಹಾಕುತ್ತೇವೆ ಎಂದು ಸೂಚನೆ ನೀಡಿದರು. ಹೈಕಮಾಂಡ್ ಸೂಚನೆ ಮೇರೆಗೆ ಶಾಸಕರನ್ನು ಒಕ್ಕಲೆಬ್ಬಿಸುವ ಆಲೋಚನೆಯನ್ನು ಸಚಿವ ಸತೀಶ್ ಜಾರಕಿಹೊಳಿ ಕೈಬಿಟ್ಟರು. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಾಡಹಬ್ಬ ದಸರಾ ಮಹೋತ್ಸವದ ಕಾರಣ ಕೆಲವರು ಮೈಸೂರಿಗೆ ಭೇಟಿ ನೀಡಲು ಬಯಸಿದ್ದಾರೆ. ಅಲ್ಲಿನ ಶಾಸಕರು ಕೂಡ ದಸರಾ ನೋಡಲು ಬರುವಂತೆ ಹೇಳಿದರು. ಹಾಗಾಗಿ ನಮ್ಮ ಸಮಾನ ಮನಸ್ಕ ಶಾಸಕರು ಒಂದೆಡೆ ಸೇರಿ ಅಲ್ಲಿಗೆ ಹೋಗಲು ಪ್ಲಾನ್ ಮಾಡಿದ್ದಾರೆ. ಅಲ್ಲದೆ, ಕೆಲವು ಶಾಸಕರು ನಮ್ಮನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗುವಂತೆ ಕೇಳಿಕೊಂಡರು. ನಾವೂ ಸಹ ಸಮಾನ ಮನಸ್ಕರೊಂದಿಗೆ ಪ್ರವಾಸಕ್ಕೆ ಹೋಗಬೇಕೆಂದು ಬಯಸಿದ್ದೆವು. ಈಗ ದಸರಾ ಹಬ್ಬದ ಕಾರಣ ಬೇಡ ಅಂದಿದ್ದೇವೆ. ಮುಂದೆ ಹೋಗಬೇಕಾದರೆ ಪಕ್ಷದೊಳಗೆ ಯಾವುದೇ ಬಣವಿಲ್ಲ ಎಂದು ಸಿಎಂ ಹಾಗೂ ಅಧ್ಯಕ್ಷರ ಗಮನಕ್ಕೆ ತರುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular