ಮಂಗಳೂರು : ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಭೈರೇಗೌಡ ನಗರದ ಹೊರವಲಯದ ಪಡೀಲ್ನಲ್ಲಿ ನಿರ್ಮಾಣವಾಗುತ್ತಿರುವ ಡಿಸಿ ಕಚೇರಿ ಸಂಕೀರ್ಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿಗೆ ಸಂಬಂಧಿಸಿದ ಕೆಲವು ಸೂಚನೆಗಳು ಹಾಗೂ ಸಲಹೆಗಳನ್ನು ಅಧಿಕಾರಿಗಳಿಗೆ ನೀಡಿದರು. ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಸಹಾಯಕ ಆಯುಕ್ತ ಹರ್ಷವರ್ಧನ್ ಮತ್ತು ಇತರ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.


