Friday, March 6, 2026
Flats for sale
Homeಜಿಲ್ಲೆಮಂಗಳೂರು : ಕುಡಿದ ಮತ್ತಿನಲ್ಲಿ ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ.

ಮಂಗಳೂರು : ಕುಡಿದ ಮತ್ತಿನಲ್ಲಿ ಯುವಕನ ಮೂಗು ಕಚ್ಚಿ ತೆಗೆದ ವ್ಯಕ್ತಿ.

ಮಂಗಳೂರು : ಶರಾಯಿ ಶೀಶೆಯಲ್ಲಿ ಎಲ್ಲವು ನಡೆಯುತ್ತೆ ಇದಕ್ಕೆ ಇದೊಂದು ಉದಾಹರಣೆ. ಪ್ರತಿ ವರ್ಷ ಹೊಸ ವರ್ಷಾಚರಣೆ ವೇಳೆ ಕುಡಿದ ಮತ್ತಿನಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತವೆ. ಬೆಂಗಳೂರಿನಲ್ಲಂತೂ ಹಲ್ಲೆ, ಜಗಳ ಸಾಮಾನ್ಯವಾಗಿದೆ. ನಿನ್ನೆ ಸ್ನೇಹಿತರೇ ಗೆಳೆಯನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದರೆ, ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಜಗಳ ನಡೆದು ಯುವಕನೊಬ್ಬನ ಮೂಗನ್ನೇ ಕಚ್ಚಿ ಕಿತ್ತು ಹಾಕಿದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಪಾರ್ಟಿ ನಡೆಸಲಾಗುತ್ತಿತ್ತು. ಈ ವೇಳೆ ಕುಡಿದ ಮತ್ತಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದ ರಾಕೇಶ್ ಮತ್ತು ಉಲ್ಪೆ ಗ್ರಾಮದ ನಿವಾಸಿ ದೀಕ್ಷಿತ್ (28) ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ.

ಇಬ್ಬರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದಾಗ ರಾಕೇಶ್ ದೀಕ್ಷಿತ್​ನ ಮೂಗನ್ನು ಕಚ್ಚಿ ಅರ್ಧ ಭಾಗವನ್ನೇ ಕಿತ್ತು ಹಾಕಿದ್ದಾನೆ. ಗಾಯಾಳು ದೀಕ್ಷಿತ್​ನನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular