Thursday, March 27, 2025
Flats for sale
Homeಜಿಲ್ಲೆಮಂಗಳೂರು ; ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಾಲಿ ಶಾಸಕ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ.

ಮಂಗಳೂರು ; ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಾಲಿ ಶಾಸಕ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ.

ಮಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸೋಮವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ನಂತರ ಕುದ್ರೋಳಿ ದೇವಸ್ಥಾನದಿಂದ ಮಂಗಳೂರು ಮಹಾನಗರ ಪಾಲಿಕೆವರೆಗೆ ಪಾದಯಾತ್ರೆ ನಡೆಸಲಾಯಿತು. ನಾಯಕನ ಬೆಂಬಲಕ್ಕೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ಕಾಮತ್ ಅವರೊಂದಿಗೆ ಸಂಸದ ನಳಿನ್ ಕುಮಾರ್ ಕಟೀಲ್, ಮೇಯರ್ ಜಯಾನಂದ ಅಂಚನ್, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಕಾರ್ಪೊರೇಟರ್‌ಗಳು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular