ಮಂಗಳೂರು : ದಕ್ಷಿಣ ಜನನದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದರು ನದಿ ಪಾತ್ರದ ಜನರು ನೀರಿಗಿಳಿಯಬಾರದೆಂದು ಆದೇಶ ಹೊರಡಿಸಿದರು ನಿಯಮ ಮೀರಿ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ.
ತೋಟಬೆಂಗ್ರೆ ನಿವಾಸಿಗಳಾದ ಯಶವಂತ್ ಮತ್ತು ಕಮಲಾಕ್ಷ ನೀರುಪಾಲಾದವರು. ಜಿಲ್ಲೆಯಲ್ಲಿ ಧಾರಾಕಾರ ಮಳೆಯ ಜೊತೆಗೆ ಕಡಲಬ್ಬರ ಕೂಡ ಜೋರಾಗಿದೆ. ಹೀಗಾಗಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿತ್ತು ಆದರೂ ಅಜಾಗರೂಕತೆಯಿಂದ ಮೀನುಗಾರಿಕೆ ತೆರಳಿದ ಇಬ್ಬರು ಸಾವನ್ನಪ್ಪಿದ್ದಾರೆ.


