ಮಂಗಳೂರು : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಿಗೆ ಜಾಮೀನು ನೀಡಲಾಗಿದೆ. ರಿಯಾಜ್ ಎಚ್.ವೈ. ಎಂಬ ವ್ಯಕ್ತಿಗೆ ಜಾಮೀನು ನೀಡಲಾಗಿದೆ.
ಜುಲೈ 26, 2022 ರಂದು ಪ್ರವೀಣ್ ನೆಟ್ಟಾರು ಮನೆಗೆ ತೆರಳುತ್ತಿದ್ದಾಗ ಆರೋಪಿಗಳು ಅವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ, NIA ಒಟ್ಟು 26 ಜನರನ್ನು ವಶಕ್ಕೆ ಪಡೆದಿತ್ತು.
ಪ್ರಕರಣದ 26 ನೇ ಆರೋಪಿ ಮತ್ತು ಕೊಡಗಿನ ಸೋಮವಾರಪೇಟೆಯ ನಿವಾಸಿ ರಿಯಾಜ್ಗೆ ಈಗ ಜಾಮೀನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.


