ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚ್ಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ದಿನಾಂಕ 2-12-2024 ರಿಂದ 3-12-2024 ರವಗೆ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿ ,ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ, ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ಪಿಯುಸಿ ವರೆಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.



ಕಾಸರಗೋಡು ಜಿಲ್ಲೆಯ ಹಲವು ಪ್ರದೇಶದ ತಗ್ಗು ಪ್ರದೇಶಗಳು ಮುಳುಗಿದ್ದು ಕೃತಕ ನೆರೆ ಸಂಭವಿಸಿದೆ. ನಾಳೆ ಅಂದ್ರೆ ಡಿಸೆಂಬರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರಾ,ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ.
ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಕೆ.ಇಂಬುಶೇಖರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕಕ್ಕೂ ತಟ್ಟಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು(ಡಿಸೆಂಬರ್ 02) ಮೈಸೂರು, ಕೋಲಾರ, ಹಾಸನ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.