ಮಂಗಳೂರು : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಆ. 23 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್,ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಕಾನಾ ಸುರತ್ಕಲ್ ನಿವಾಸಿ ಸುಶಾಂತ್ ,ಕೆ ವಿ ಅಲೆಕ್ಸ್(27) ಹಾಗೂ ನಿತಿನ್(26) ಎಂದು ತಿಳಿದುಬಂದಿದೆ. ಜೊತೆಯಲ್ಲಿ ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ ಆರುಣ್ ಶೆಟ್ಟಿ(56), ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪತ್ತೆಯ ಬಗ್ಗೆ ಶ್ರೀ ರವಿಶಂಕರ್, ಮಾನ್ಯ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ನಿರ್ದೇಶನದಂತೆ, ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು (ಉತ್ತರ ಉಪ ವಿಭಾಗ) ಶ್ರೀ ಶ್ರೀಕಾಂತ್ ಕೆ ರವರ ಮಾರ್ಗದರ್ಶನದಲ್ಲಿ, ಸುರತ್ಕಲ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿಯವರಾದ ಅಣ್ಣಪ್ಪ, ಉಮೇಶ್ ಕುಮಾರ್, ತಿರುಪತಿ, ಅಜಿತ್ ಮ್ಯಾಥ್ಯೂ, ರಾಮು ಕೆ, ಕಾರ್ತೀಕ್, ವಿನೋದ್ ರವರು ಹಾಗೂ ಸಿಸಿಬಿ ಘಟಕದ ಅಧಿಕಾರಿ/ಸಿಬ್ಬಂದಿಯವರು ಹಾಗೂ ಎಸ್ ಎ ಎಫ್ ತಂಡದವರು ಮತ್ತು ಶ್ವಾನ ದಳದವರು ಆರೋಪಿಗಳ ಪತ್ತೆ ಹಾಗೂ ತನಿಖೆಯ ಕಾರ್ಯದಲ್ಲಿ ಭಾಗವಹಿಸಿದ್ದಾರೆ.


