ಮಂಗಳೂರು : ಕದ್ರಿ ದೇವಸ್ಥಾನದ ಆವರಣದಲ್ಲಿ ಗುರುವಾರ ರಾತ್ರಿ ಬೈಕ್ನಲ್ಲಿ ಬಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿವಿಧ ಸಮುದಾಯದ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ದೇವಸ್ಥಾನಕ್ಕೆ ಭೇಟಿ ನೀಡಿದ ಉದ್ದೇಶದ ಬಗ್ಗೆ ವಿಚಾರಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುವಕರು ಅಸೈಗೋಳಿ ಮೂಲದವರಾಗಿದ್ದು, ಕಾಟಿಪಳ್ಳಕ್ಕೆ ಹೋಗುತ್ತಿದ್ದು, ಗೂಗಲ್ ಮ್ಯಾಪ್ ಫಾಲೋ ಮಾಡಿದ್ದರಿಂದ ತಪ್ಪಾಗಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದರು.
ಯುವಕರು ದೇವಸ್ಥಾನದ ವರಾಂಡಕ್ಕೆ ಬೈಕ್ ತಂದಿದ್ದಲ್ಲದೇ ಪಾದರಕ್ಷೆ ಧರಿಸಿದ್ದರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನದ ಆವರಣವನ್ನು ಪ್ರವೇಶಿಸಿದ ಉದ್ದೇಶವನ್ನು ತಿಳಿಸುವಂತೆ ಪದೇ ಪದೇ ಕೇಳಿದಾಗ, ಮೂವರಿಂದ ಸ್ಪಷ್ಟ ಉತ್ತರ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ಪೊಲೀಸರನ್ನು ಕರೆಸಿ ಅವರಿಗೆ ಒಪ್ಪಿಸಲಾಯಿತು.


