Thursday, March 12, 2026
Flats for sale
Homeಕ್ರೈಂಮಂಗಳೂರು : ವ್ಯಕ್ತಿಯ ಮೇಲೆ ತಲವಾರು ಧಾಳಿ ಪ್ರಕರಣ : ಮೂವರ ಬಂಧನ

ಮಂಗಳೂರು : ವ್ಯಕ್ತಿಯ ಮೇಲೆ ತಲವಾರು ಧಾಳಿ ಪ್ರಕರಣ : ಮೂವರ ಬಂಧನ

ಮಂಗಳೂರು : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂವಿ ಶೆಟ್ಟಿ ಕಾಲೇಜು ರಸ್ತೆಯ ಬಳಿ ಆ.20ರಂದು ತನ್ನ ಮನೆಯತ್ತ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಮೂವರು ಹರಿತವಾದ ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕಾವೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಮೂವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರಿನ ಉರುಂಡಾಡಿಗುಡ್ಡೆ ನಿವಾಸಿ ಚರಣ್ ರಾಜ್ ಅಲಿಯಾಸ್ ಚರಣ್ (23), ಸುರತ್ಕಲ್ ಹೊಸಬೆಟ್ಟು ನಿವಾಸಿ ಸುಮಂತ್ ಬರ್ಮನ್ (24) ಮತ್ತು ಕೋಡಿಕಲ್ ಸುಂಕದಕಟ್ಟೆ ಕಲ್ಬಾವಾಯಿ ರಸ್ತೆ ನಿವಾಸಿ ಅವಿನಾಶ್ (24) ಎಂದು ಗುರುತಿಸಲಾಗಿದೆ.

ಚರಣ್ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ಒಂದು, ಪಣಂಬೂರು ಠಾಣೆಯಲ್ಲಿ ಒಂದು ಮತ್ತು ಕಾವೂರು ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
 ಸುಮಂತ್ ವಿರುದ್ಧ ಪಣಂಬೂರು ಮತ್ತು ಬರ್ಕೆ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ಹಾಗೂ ಕಾವೂರು ಪೊಲೀಸ್ ಠಾಣೆಗಳಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಅವಿನಾಶ್ ವಿರುದ್ಧ ಉರ್ವ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಕಂಕನಾಡಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಆತನನ್ನು ಉರ್ವಾ ಪೊಲೀಸ್ ಠಾಣೆಯ ವ್ಯಾಪ್ತಿಯಿಂದಲೂ ಹೊರಹಾಕಲಾಗಿದೆ.

ಎಸಿಪಿ ಮನೋಜ್ ಕುಮಾರ್, ಡಿಸಿಪಿಗಳಾದ ಅಂಶುಕುಮಾರ್ ಮತ್ತು ದಿನೇಶ್ ಕುಮಾರ್ ನೇತೃತ್ವದಲ್ಲಿ ಆರೋಪಿಗಳ ಬಂಧನ ಕಾರ್ಯಾಚರಣೆ ನಡೆದಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular