Thursday, March 27, 2025
Flats for sale
Homeರಾಜಕೀಯಮೈಸೂರು : ಮುಡಾ ಹಗರಣ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ದೂರು...

ಮೈಸೂರು : ಮುಡಾ ಹಗರಣ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮತ್ತೊಂದು ದೂರು ದಾಖಲು .

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ದ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.

ಪ್ರಕರಣದ A 4 ಆರೋಪಿ ಜೆ.ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು ಜಮುನಾ ಎಂಬುವವರು ಸಿಎಂ ಪತ್ನಿ ಬಿ.ಎನ್.ಪಾವರ್ತಿ ಅವರ ವಿರುದ್ಧ ದಾವೆ ಹೂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ ಜಮೀನು ಎಂದು ಹೇಳುವ ಸಂಬಂಧ ಕೇಸ್ ದಾಖಲಿಸಿದ್ದಾರೆ.

ಕೆಸರೆ ಗ್ರಾಮದ ಸರ್ವೆ ನಂಬರ್ 464 ರ ಜಮೀನಿನಲ್ಲಿ ನಮಗೂ ಭಾಗ ಬರಬೇಕು. ಪಿತ್ರಾರ್ಜಿತ ಆಸ್ತಿಯಲ್ಲಿ ನನಗೂ ಪಾಲು ಕೊಡಿ ಎಂದು ಜಮುನಾ ಅವರು ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಸರ್ವೆ ನಂ.464ರ 3.16 ಎಕರೆ ಭೂಮಿ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದಾರೆ. ಸ್ವಂತ ದೊಡ್ಡಪ್ಪ ದೇವರಾಜು ಹಾಗು ಕುಟುಂಬದವರು ಎದುರಾಳಿ ಮಾಡಿದ್ದು,ಮೈಸೂರು ಮುಡಾ ಕಮೀಷನರ್, ಜಿಲ್ಲಾಧಿಕಾರಿಯನ್ನೂ ಪಾರ್ಟಿ ಮಾಡಿದ್ದಾರೆ. ಸಿ.ಎನ್.ಆರ್ ನಂಬರ್ ಏಂಒಖ 020031832024ರ ಅಡಿ ದಾವೆ ಹೂಡಿದ್ದು,ಮಂಜುನಾಥ್ ಸ್ವಾಮಿ,ಜೆ.ದೇವರಾಜು ಸರೋಜಮ್ಮ, ಡಿ.ಶೋಭಾ, ಡಿ.ದಿನಕರ್,ಡಿ.ಪ್ರಭಾ, ಡಿ.ಪ್ರತಿಭಾ, ಡಿ.ಶಶಿಧರ್ ,ಬಿ.ಎಂ.ಮಲ್ಲಿಕಾರ್ಜುನ್ ಸ್ವಾಮಿ, ಡಿ.ಎನ್.ಪಾರ್ವತಿ, ಮುಡಾದ ಆಯುಕ್ತ,ಹಾಗೂ ಮೈಸೂರು ಜಿಲ್ಲಾಧಿಕಾರಿಗಳು ಎಂದು ಉಲ್ಲೇಖಿಸಿದ್ದಾರೆ.

ಮುಡಾ ಹಗರಣ ಸಂಬಂಧ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಈಗಾಗಲೇ ಹೈಕೋರ್ಟ್ ಡಿಸೆಂಬರ್ 10 ಕ್ಕೆ ಮುಂದೂಡಿದೆ. ಈ ನಡುವೆ ಹಗರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು ಡಿಸೆಂಬರ್ 10 ರಂದು ವರದಿ ಸಲ್ಲಿಕೆಗೆ ಕೋರ್ಟ್ ಸೂಚಿಸಿದೆ. ಈ ನಡುವೆಯೇ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular