ಯಾದಗಿರಿ : ಯಾದಗಿರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಬಾರಿ ಮಳೆಯಾಗುತ್ತಿದ್ದು ಇಂದು ಸಿಡಿಲು ಬಡಿದು ಮೂರು ಜನ ಸ್ಥಳದಲ್ಲೇ ಸಾವನಪ್ಪಿದ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡದಲ್ಲಿ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು ಮೃತರನ್ನು ಚೇನು (22) ಕಿಶನ್ (30) ಸುಮಿ ಬಾಯಿ (30)ಎಂದು ತಿಳಿಯಲಾಗಿದೆ.
ಮೃತರು ಜೀನಕೇರಾ ತಾಂಡದ ನಿವಾಸಿಗಲಾಗಿದ್ದು ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.


