ಸುಬ್ರಹ್ಮಣ್ಯ : ಅನ್ಯ ಸಮುದಾಯದ ವಿದ್ಯಾರ್ಥಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಎಲಿಮಲೆಯಿಂದ ವರದಿಯಾಗಿದೆ.
ಹಲ್ಲೆಗೊಳಗಾದ ಯುವಕನನ್ನು ನಿಯಾಜ್ ಎಂದು ಗುರುತಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವರದಿಗಳ ಪ್ರಕಾರ, ನಿಯಾಜ್ ಸ್ಥಳೀಯ ಯುವತಿಗೆ ಸಂದೇಶ ಕಳುಹಿಸುತ್ತಿದ್ದನೆಂದು ಆರೋಪಿಸಲಾಗಿದ್ದು, ಸ್ಥಳೀಯ ನಿವಾಸಿಗಳ ಗುಂಪೊಂದು ಆತನಿಗೆ ಕರೆ ಮಾಡಿ ನಂತರ ಆತನ ಮೇಲೆ ಹಲ್ಲೆ ನಡೆಸಿದೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


