ಉಡುಪಿ : ಉಡುಪಿ-ಚಿಕ್ಕಮಗಳೂರು ಕ್ಷೇತ್ರದಕಾಂಗ್ರೆಸ್ ನಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಂಗಳವಾರ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ. ಅವರಿಗೆ ಲೋಕಸಭಾ ಚುನಾವಣಾ ಟಿಕೆಟ್ ಪಕ್ಕಾ ಎಂದು ಹೇಳಲಾಗುತ್ತಿದೆ.
ಹೆಗ್ಗಡೆಯವರು ತಮ್ಮ ಅಧಿಕೃತ ಹೇಳಿಕೆಯಲ್ಲಿ, “ನನ್ನ ರಾಜಕೀಯ ಮತ್ತು ಸಾಮಾಜಿಕ ಜೀವನದಲ್ಲಿ ನನಗೆ ಯಾವಾಗಲೂ ಮಾರ್ಗದರ್ಶನ ಮತ್ತು ಬೆಂಬಲ ನೀಡಿದ ನಿಮ್ಮೆಲ್ಲರಿಗೂ ನಾನು ಋಣಿಯಾಗಿದ್ದೇನೆ. ನಾನು ಈ ವಿಷಯವನ್ನು ನಿಮ್ಮೊಂದಿಗೆ ಚರ್ಚಿಸಿದ್ದೇನೆ ಮತ್ತು ನನ್ನ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದೇನೆ. ಕರಾವಳಿ ಕರ್ನಾಟಕದ ಅಭಿವೃದ್ಧಿಗಾಗಿ ರಾಜಕೀಯದಲ್ಲಿ ಸಕ್ರಿಯರಾಗಲು ಸಂಕಲ್ಪ ಮಾಡಿದ್ದೇನೆ.ಎಂದು ಹೇಳಿದ್ದಾರೆ.
ಅದರಂತೆ ಮಾರ್ಚ್ 12ರ ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ. ನಾನು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದೇನೆ ಮತ್ತು ನನ್ನ ಮುಂದಿನ ರಾಜಕೀಯ ನಡೆ ನಿರ್ಧರಿಸಿದ್ದೇನೆ.
“ನನ್ನೊಂದಿಗೆ ಇದ್ದ ನೀವೆಲ್ಲರೂ ಮಾರ್ಚ್ 12 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನನ್ನೊಂದಿಗೆ ಸೇರಬೇಕೆಂದು ನಾನು ವಿನಂತಿಸುತ್ತೇನೆ. ನನಗೆ ಮಾರ್ಗದರ್ಶನ ನೀಡಲು ಮತ್ತು ನಿಮ್ಮ ಸಂಪೂರ್ಣ ಸಹಕಾರವನ್ನು ನೀಡುವಂತೆ ನಾನು ಕೇಳುತ್ತೇನೆ” ಎಂದು ಅವರು ಹೇಳಿದರು.