ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯ ಬದಿಯಲ್ಲಿ ಡಿಸೆಂಬರ್ 13, ಬುಧವಾರ ಬೆಳಗ್ಗೆ ಯುವಕನೊಬ್ಬ ತನ್ನ ದ್ವಿಚಕ್ರ ವಾಹನ ಮತ್ತು ಪಾದರಕ್ಷೆಗಳನ್ನುಬಿಟ್ಟು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಯುವಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಶೋಧ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾದ ಯುವಕ ಉಡುಪಿಯ ಖಾಸಗಿ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಉದ್ಯೋಗಿ ಎನ್ನಲಾಗಿದೆ.
ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು ,ಕಾರ್ಯ ಶೋಧ ನಡೆಯುತ್ತಿದೆ.


