ಉಡುಪಿ : ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಲಾದ ಅಮಾನವೀಯ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ.ಹಲ್ಲೆಗೊಳಗಾದ ಮಗುವನ್ನು ಪ್ರೇರಿತ್ ಎಂದು ಗುರುತಿಸಲಾಗಿದ್ದು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಉಡುಪಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿಯ ಸರಕಾರಿ ಆಸ್ಪತ್ರೆಗೆ ಹುಷಾರಿಲ್ಲ ಅಂತ ಪ್ರೇರಿತ್ನನ್ನು ಪೋಷಕರು ಗುರುವಾರ ಬೆಳಿಗ್ಗೆ ದಾಖಲಿಸಿದ್ದರು. ಪ್ರೇರಿತ್ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.ಆತನ ಮೇಲೆ ನಡೆಸಲಾದ ಭೀಕರ ಹಲ್ಲೆಯನ್ನು ಕಂಡು ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತ್ನನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ವೈದ್ಯರು ಡಿಹೆಚ್ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದು ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ ಎನ್ನಲಾಗಿದೆ .
ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದುಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಸಿಕೊಳ್ಳುತ್ತಿದೆ ಬಳಿಕಮಗುವಿನ ಹೇಳಿಕೆ ಪಡೆದು ಕ್ರಮಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.