ಮಂಗಳೂರು : ಕೊಣಾಜೆ ಸಮೀಪದ ನಡುಪದವು ಬಳಿ ಬೀಡು ಬಿಟ್ಟಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ನಾಯಿಯೊಂದು ಸಿಕ್ಕಿಬಿದ್ದಿದೆ.
ಕಳೆದ ವಾರ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದಾಗ ಆ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೋನು ಹಾಕಿದ್ದರು. ಆದರೆ ಭಾನುವಾರ ನಾಯಿ ಬೊಗಳಿದ ಸದ್ದು ಕೇಳಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಚಿರತೆಯ ಬದಲು ಬೋನಿನಲ್ಲಿ ಸಿಕ್ಕಿಬಿದ್ದಿರುವುದು ಕಂಡು ಬಂದಿದೆ. ಬಳಿಕ ಸ್ಥಳೀಯರು ನಾಯಿಯನ್ನು ಬೋನಿನಿಂದ ಹೊರತೆಗೆದರು.
.