ಕೋಲಾರ : ಕೌಟುಂಬಿಕ ಸಮಸ್ಯೆ ಹಿನ್ನೆಲೆ ಮನನೊಂದು ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯಾ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.
ಚೈತ್ರಾಬಾಯಿ ಹಾಗೂ ಧನ್ಯಬಾಯಿ ಸಾವಿಗೀಡಾಗಿದ್ದ ಬಾಲಕಿಯರು.
ಪೊಲೀಸರ ತನಿಖೆ ವೇಳೆ ಸಾವಿನ ರಹಸ್ಯ ಬಯಲಾಗಿದ್ದು ಬಾಲಕಿಯರಿಬ್ಬರೂ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಗೂಡ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ -2 ರಂದು ನಾಪತ್ತೆಯಾಗಿದ್ದ ಬಾಲಕಿಯರು. ಅಕ್ಟೋಬರ್ -4 ರಂದು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು ಸದ್ಯ ಮರಣೋತ್ತರ ಪರೀಕ್ಷೆ ವರದಿ ಹಾಗೂ ಮನೆಯಲ್ಲಿ ತನಿಖೆ ವೇಳೆ ಬಾಲಕಿಯ ಸ್ಕೂಲ್ ಬ್ಯಾಗ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತನಿಖೆ ನಡೆಯುತ್ತಿದೆ.