ಗಂಗಾವತಿ : ರಜೆ ಕಳೆಯಲು ಸ್ನೇಹಿತರೊಂದಿಗೆ ಬಂದು ಬಂಡೆಯ ಮೇಲಿAದ ತುಂಗಭದ್ರಾ ನದಿಗೆ ಜಿಗಿದಿದ್ದ ಹೈದರಾಬಾದ್ ಖಾಸಗಿ ಆಸ್ಪತ್ರೆಯ ವೈದ್ಯೆ ಅನನ್ಯ ಮೋಹನ್ ರಾವ್ ಅವರ ಮೃತದೇಹ ಗುರುವಾರ ಪತ್ತೆಯಾಗಿದೆ.
ರೀಲ್ಸ್ ಹುಚ್ಚು ಈ ಯುವಕ ಯುವತಿಯರಿಗೆ ಹೆಚ್ಚಾಗುತ್ತಿದ್ದು ಇದರಿಂದ ಹಲವರು ಪ್ರಾಣಕಳೆದುಕೊಂಡಿದ್ದಾರೆ. ಸುಮಾರು ೧೬ ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಮೃತದೇಹವನ್ನು ನದಿಯಿಂದ ಮೇಲೆತ್ತ ಲಾಗಿದೆ. ನದಿ ದಡದಲ್ಲಿಯೇ ಶವದ ಮರಣೋತ್ತರ ಪರೀಕ್ಷೆ ಮುಗಿಸಿದ ವೈದ್ಯರು, ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.