ಗದಗ : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಂಡಿಗೆ ಬಿದ್ದ ಘಟನೆ ಹಿನ್ನೆಲೆ ಮೂವರು ಯುವಕರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ನವೀನ್ ಕುಂಬಾರ್ (23) ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಎಂದು ತಿಳಿದುಬಂದಿದೆ. ಉಳಿದ ಮೂವರು ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದೆ.
ಕುಂದಗೋಳದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿಗೆ ಹೋಗುತ್ತಿದ್ದಾಗ ಈ ದುರ್ಘಟನ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಪರಾರಿಯಾಗಿದ್ದಾನೆ.


