Friday, February 21, 2025
Flats for sale
Homeರಾಜ್ಯಚಾಮರಾಜನಗರ : ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದ ಯೋಗಪಟು ಸಾವು ..!

ಚಾಮರಾಜನಗರ : ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದ ಯೋಗಪಟು ಸಾವು ..!

ಚಾಮರಾಜನಗರ : ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದ ಯೋಗಪಟುವೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಮೃತ ದುರ್ದೈವಿ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್ ಕಾವೇರಿ ನದಿಗೆ ಇಳಿದಿದ್ದರು. ನಾಗರಾಜ್ ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು.ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ನಾಗರಾಜ್ ಮೃತಪಟ್ಟಿದ್ದರು. ಯೋಗಪಟು ನಾಗರಾಜ್ ಅವರು ಕೊಳ್ಳೇಗಾಲ ಪಟ್ಟಣದಲಕ್ಷ್ಮಿ ನಾರಾಯಣ ದೇವಾಲಯದ ಬೀದಿಯಲ್ಲಿ ವಾಸವಾಗಿದ್ದು, ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದರು. ನಾಗರಾಜ್ ಅವರು ಕೊಳ್ಳೇಗಾಲದಲ್ಲಿ ಯೋಗಗುರು ಎಂದೇ ಖ್ಯಾತರಾಗಿದ್ದರು. ನಾಗರಾಜ್ ಅವರು ಯುವಕರಿಗೆ, ವಯೋವೃದ್ಧರಿಗೆ ಯೋಗ ಹೇಳಿಕೊಡುತ್ತಿದ್ದರು.

ನಾಗರಾಜ್ ಅವರು ಯಾವಾಗಲೂ ಲವ ಲವಿಕೆಯಿಂದ ಇರುತ್ತಿದ್ದರು. ನಾಗರಾಜ್ ಅವರು ನಿನ್ನೆ ತಮ್ಮ ಒಡನಾಡಿಗಳ ಜತೆ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನದ ಜತೆ ಯೋಗ ಮಾಡುತ್ತಿದ್ದರು. ಹಿಮ್ಮುಕವಾಗಿ ತೇಲುತ್ತಾ ಯೋಗ ನಿದ್ರೆ ಮಾಡುತ್ತಿದ್ದರು. ೩೦ ನಿಮಿಷ ಆದರೂ ನಾಗರಾಜ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಸ್ನೇಹಿತರು ಹತ್ತಿರ ಹೋಗಿ ನೋಡಿದಾಗ ಮೃತ ಪಟ್ಟಿರುವುದ ಬೆಳಕಿಗೆ ಬಂದಿದೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular