ಚಿತ್ರದುರ್ಗ ; ಶ್ವಾಸಕೋಶ ಸಂಬಂಧೀ ಖಾಯಿಲೆಯಿಂದ ಬಳಲುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ತುರ್ತುನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ. ಡಿ. ಸುಧಾಕರ್ ರವರು ಶ್ವಾಸಕೋಶ ಸಂಬಂಧೀ ಖಾಯಿಲೆಯಿಂದ ಬಳಲುತ್ತಿದ್ದರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಇವರು ಇಂದು ಹೈದ್ರಾಬಾದ್ ಮೂಲದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಡಾ. ಸಂದೀಪ್ ರವರು 48 ಗಂಟೆಗಳ ಕಾಲ ಅಬ್ಜರ್ವೇಶನ್ ನಲ್ಲಿ ಇಡಬೇಕೆಂದು ಹೇಳಿದ್ದು ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ಬೆಂಗಳೂರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಿದ್ದಾರೆ.


