ತುಮಕೂರು : ಹೃದಯಾಘಾತದಿಂದ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ಭೈರಾಪುರ ಗ್ರಾಮದ ಜಯರಾಂ ಪುತ್ರನಾಗಿದ್ದ ರಾಹುಲ್ (16) ಮೃತ ವಿದ್ಯಾರ್ಥಿ.
ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್ಎಸ್ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ರಾಹುಲ್ ನಿನ್ನೆ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದನು,ರಾತ್ರಿ 9:30 ರ ಸುಮಾರಿಗೆ ರಾಹುಲ್ ಗೆ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿವಿದ್ಯಾರ್ಥಿ ರಾಹುಲ್ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.