ದೆಹಲಿ : ಲೋಕಸಭೆ ಚುನಾವಣೆ ಇನ್ನೇನು ಕೆಲವೇ ತಿಂಗಳಲ್ಲಿ ನಡೆಯಲಿದ್ದು ರಾಜ್ಯದ ಕಾಂಗ್ರೆಸ್ ಸರಕಾರ ಮೋದಿ ಸರಕಾರದ ವಿರುದ್ಧ ಅನುದಾನದಲ್ಲಿ ತಾರತಮ್ಯ ನಡೆಸುತ್ತಿದೆ ಎಂದು ಪ್ರತಿಭಟಿಸುತ್ತಿದ್ದಾರೆ .
ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಮಲತಾಯಿ ಧೋರಣೆಯನ್ನು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯಸಂಪುಟದ ಎಲ್ಲ ಸಚಿವರು, ಕಾಂಗ್ರೆಸ್ ಪಕ್ಷದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು, ಸಂಸದರು ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.


