Wednesday, November 5, 2025
Flats for sale
Homeವಿದೇಶನವದೆಹಲಿ : ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ,ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆ ಪ್ರಯತ್ನ : ಪ್ರಧಾನಿ ನರೇಂದ್ರ...

ನವದೆಹಲಿ : ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ,ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆ ಪ್ರಯತ್ನ : ಪ್ರಧಾನಿ ನರೇಂದ್ರ ಮೋದಿ.

ನವದೆಹಲಿ : ಶಾಂತಿ ಮತ್ತು ಸ್ಥಿರತೆಯ ಮರುಸ್ಥಾಪನೆ ಪ್ರಯತ್ನಗಳನ್ನು ಭಾರತ ಸದಾ ಬೆಂಬಲಿಸಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ ಎಂದು ತಿಳಿಸಿದ್ದಾರೆ.

ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಸಂಘರ್ಷ ಹೆಚ್ಚಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ,ಅದಕ್ಕೆ ಅಂತ್ಯ ಹಾಡಬೇಕಾಗಿದೆ ಎಂದಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊAಡಿರುವ ಪ್ರಧಾನಿ.”ಪ್ರಾದೇಶಿಕ ಉಲ್ಬಣವನ್ನು ತಡೆಗಟ್ಟಲು ಮತ್ತು ಎಲ್ಲಾ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆ ಖಚಿತಪಡಿಸಿಕೊಳ್ಳಲು ನಿರ್ಣಾಯಕವಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ಪ್ರಯತ್ನಗಳನ್ನು ಬೆಂಬಲಿಸಲು ಭಾರತವು ಬದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿನ ಪ್ರಕ್ಷುಬ್ಧ ಜಾಗತಿಕ ಬೆಳವಣಿಗೆಗಳ ನಡುವೆ ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆಯ ನಡುವಿನ ಮಾರಣಾಂತಿಕ ಸಂಘರ್ಷ ಉಲ್ಬಣ ಸೇರಿದಂತೆ ಹಲವು ವಿಷಯಗಳು ಕುರಿತು ಚರ್ಚೆ ನಡೆಸಲಾಗಿದೆ ಎಂದಿದ್ದಾರೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗಿನ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದೆ ಎಂದಿದ್ಧಾರೆ. ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಹೆಚ್ಚುತ್ತಿರುವ ಸಂಘರ್ಷ ಮಧ್ಯಪ್ರಾಚ್ಯದಲ್ಲಿ ಶಾಂತಿಗೆ ಅಡ್ಡಿಪಡಿಸುತ್ತದೆ. ಹಮಾಸ್ ಬಂದೂಕುಧಾರಿಗಳು ಗಾಜಾದಲ್ಲಿ ಯುದ್ಧ ಪ್ರಾರಂಭಿಸಿದ ನಂತರ ಹೋರಾಟ ತೀವ್ರಗೊಂಡಿದೆ ನಂತರ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಯುತ್ತಿರುವ ದಾಳಿಗಳು.ಇಸ್ರೇಲ್‌ನ ಪ್ರತಿವರ್ತನೆ ಹಮಾಸ್‌ಗೆ ಗಮನಾರ್ಹವಾದ ಹೊಡೆತ ನೀಡಿದೆ ಎಂದಿದ್ದಾರೆ.

ಉತ್ತರ ಇಸ್ರೇಲ್ ಮತ್ತು ಇಸ್ರೇಲಿ ಆಕ್ರಮಿತ ಗೋಲನ್ ಹೈಟ್ಸ್ಗೆ ಹಿಜ್ಬುಲ್ಲಾ8,೦೦೦ ರಾಕೆಟ್‌ಗಳನ್ನು ಉಡಾವಣೆ ಮಾಡಿದೆ. ಈ ಗುಂಪು ಶಸ್ತçಸಜ್ಜಿತ ವಾಹನಗಳ ಮೇಲೆ ಟ್ಯಾಂಕ್ ವಿರೋಧಿ ಕ್ಷಿಪಣಿ ಹಾರಿಸಿದೆ ಮತ್ತು ಸ್ಫೋಟಕ ಡ್ರೋನ್‌ಗಳೊಂದಿಗೆ ಮಿಲಿಟರಿ ಗುರಿಗಳ ಮೇಲೆ ದಾಳಿ ಮಾಡಿದೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular