ನವದೆಹಲಿ : ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ 2008 ರಿಂದ ಭಾರತೀಯ ಕ್ರಿಕೆಟ್ಗೆ ಸೇವೆ ಸಲ್ಲಿಸುತ್ತಿದ್ದಾರೆ. ವಿರಾಟ್ ತಮ್ಮ ಜೀವನದ 14 ವರ್ಷಗಳನ್ನು ಕ್ರಿಕೆಟ್ ಗೆ ಮೀಸಲಿಟ್ಟಿದ್ದಾರೆ. ಅವರು ಏಕಾಂಗಿಯಾಗಿ ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟಿದ್ದಾರೆ. 36 ವರ್ಷದ ಈ ಆಟಗಾರನನ್ನು ಆಧುನಿಕ ಕ್ರಿಕೆಟ್ನ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.
ವಿರಾಟ್ ಕೊಹ್ಲಿ ಮೇ 12 ರಂದು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ಅವರು ತಮ್ಮ ಕ್ರಿಕೆಟ್ ಮೂಲಕ ಭಾರತಕ್ಕೆ ಲೆಕ್ಕವಿಲ್ಲದಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. ವಿರಾಟ್ ಅವರ ಸಾಧನೆಗಳಿಗೆ ಸೂಕ್ತ ಗೌರವ ಸಲ್ಲಿಸಲು ಸುರೇಶ್ ರೈನಾ ಸರ್ಕಾರವನ್ನು ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದಾರೆ. ಭಾರತೀಯ ಕ್ರಿಕೆಟ್ಗೆ ನೀಡಿದ ಕೊಡುಗೆಗಾಗಿ ವಿರಾಟ್ ಕೊಹ್ಲಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ರೈನಾ ಹೇಳಿದ್ದಾರೆ ಭಾರತ ರತ್ನ ಪಡೆದ ಏಕೈಕ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್.ದೆಹಲಿ ಕ್ರಿಕೆಟಿಗನಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಬೇಡಿಕೆ ಬಂದಿದೆ.
ಅವರು ಭಾರತ ಪರ ಒಟ್ಟು 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 46.85 ಸರಾಸರಿಯಲ್ಲಿ 30 ಶತಕಗಳು ಮತ್ತು 31 ಅರ್ಧಶತಕಗಳೊಂದಿಗೆ 9230 ರನ್ ಗಳಿಸಿದ್ದಾರೆ. ಈಗ ಸುರೇಶ್ ರೈನಾ ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದಾರೆ, ಇದರಿಂದ ಭಾರತೀಯ ಕ್ರಿಕೆಟ್ಗೆ ಅವರ ಅನುಪಮ ಕೊಡುಗೆಯನ್ನು ಗೌರವಿಸಬಹುದು. ಕಾರ್ಯಕ್ರಮವೊಂದರಲ್ಲಿ ರೈನಾ, ವಿರಾಟ್ ಕೊಹ್ಲಿ ಸಾಧಿಸಿದ ಎಲ್ಲಾ ಸಾಧನೆಗಳಿಗಾಗಿ, ಅವರು ಭಾರತ ಮತ್ತು ಭಾರತೀಯ ಕ್ರಿಕೆಟ್ಗಾಗಿ ನೀಡಿದೆ ಕೊಡುಗೆ ಗಮನಿಸಿ, ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಬೇಕು ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಅವರ ನಿವೃತ್ತಿ ಪಂದ್ಯವನ್ನು ಆಯೋಜಿಸಲು ರೈನಾ ಬಿಸಿಸಿಐಗೆ ಒತ್ತಾಯಿಸಿದ್ದಾರೆ. 36 ವರ್ಷದ ಕೊಹ್ಲಿ ದೀರ್ಘಾವಧಿಯ ಕ್ರಿಕೆಟ್ನಲ್ಲಿ ಭಾರತದ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ಇದಕ್ಕೂ ಮೊದಲು, 2024 ರಲ್ಲಿ ಟಿ 20 ವಿಶ್ವಕಪ್ ಗೆದ್ದ ನಂತರ, ವಿರಾಟ್ ಇದಕ್ಕೂ ವಿದಾಯ ಹೇಳಿದ್ದರು. ಕಳೆದ ವರ್ಷ ಟಿ20 ಅಂತಾರಾಷ್ಟ್ರೀಯ ಪAದ್ಯಗಳಿAದ ನಿವೃತ್ತರಾದ ಅವರು ಈಗ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಆಡಲಿದ್ದಾರೆ. ವಿರಾಟ್ ಮೂರು ಸ್ವರೂಪದ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 550 ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದು, ಇದರಲ್ಲಿ ಅವರು 27,299 ರನ್ಗಳನ್ನು ಗಳಿಸಿದ್ದಾರೆ. 2008ರಲ್ಲಿ ಪಾದಾರ್ಪಣೆ ಮಾಡಿದ ನಂತರ ವಿರಾಟ್ ಒಟ್ಟು 82 ಶತಕಗಳನ್ನು ಬಾರಿಸಿದ್ದಾರೆ.