ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ.
ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆ ಮತ್ತು ತನಿಖೆಯ ಹಂತಗಳನ್ನು ಪರಿಗಣಿಸಿ ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೆ, ಒಂದು ವರ್ಷದ ಬಳಿಕವಷ್ಟೇ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದೆ.
ಪ್ರಕರಣದ ವಿಚಾರಣೆಯನ್ನು ವೇಗಗೊಳಿಸುವಂತೆ ಸೂಚಿಸಿರುವ ನ್ಯಾಯಾಲಯ, ಒಂದು ವರ್ಷದೊಳಗೆ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ. ಈ ಮೊದಲು ಕೆಳ ಹಂತದ ನ್ಯಾಯಾಲಯಗಳಲ್ಲೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ದರ್ಶನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿಯೂ ಜಾಮೀನು ಸಿಗದೇ ಹಿನ್ನಡೆಯಾಗಿದೆ.
ಪ್ರಕರಣದ ಸಾಕ್ಷ್ಯಾಧಾರಗಳು ಮತ್ತು ತನಿಖೆಯ ಗಂಭೀರತೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ತಕ್ಷಣದ ಬಿಡುಗಡೆಗೆ ಸಮ್ಮತಿ ಸೂಚಿಸಿಲ್ಲ.


