ನೆಲಮಂಗಲ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವನಪ್ಪಿದ ಘಟನೆ ಬೆಂಗಳೂರಿನ ದಾಸನಪುರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಮೇಲ್ನೋಟಕ್ಕೆ ಹಿಟ್ ಆ್ಯಂಡ್ ರನ್ಗೆ ಚಿರತೆ ಸಾವಿಗೀಡಾಗಿದೆ ಎಂದು ತಿಳಿದುಬಂದಿದ್ದು 6 ವರ್ಷದ ಗಂಡು ಚಿರತೆಯ ಮೃತದೇಹ ಪತ್ತೆಯಾಗಿದೆ. ಯಾರೊ ಚಿರತೆಯನ್ನು ಕೊಂದು ಬಿಸಾಡಿದಿದ್ದಾರೆ ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.