ಪುತ್ತೂರು: ಜನರಿಗೆ ಪ್ರಧಾನಿ ಮೋದಿ ಮಾಡಿದ ಒಳ್ಳೆಯ ಕೆಲಸಗಳ ಬಗ್ಗೆ, ದೇಶಕ್ಕೆ ಬರುವ ಆತಂಕದ ವಿಷಯಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಮುಂಬವರು ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲುವಿಗೆ ‘ನಮೋ ಬ್ರಿಗೇಡ್ ೨.೦’ ಪ್ರಚಾರ ರ್ಯಾಲಿಯು ಅ.೧ಕ್ಕೆ ಪುತ್ತೂರಿಗೆ ಆಗಮಿಸಿದ ಮತ್ತು ಪುತ್ತೂರಿನಲ್ಲಿ ಅದ್ದೂರಿಯ ಸ್ವಾಗತ ಮಾಡಿ ಬೈಕ್ ರ್ಯಾಲಿಯ ಮೂಲಕವೇ ಪುತ್ತೂರಿನಿಂದ ಮುಂದಿನ ತಾಲೂಕಿಗೆ ಬೀಳ್ಕೊಟ್ಟ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರಿಗಳು ಒಂದಾಗಿ ಮೋದಿಯನ್ನು ಕೆಳಗಿಸುವ ಪ್ರಯತ್ನ ಸುಳ್ಳಾಗಲಿದೆ:
ನಮೋ ಬ್ರಿಗೇಡ್ ೨.೦ ಇದರ ರಾಜ್ಯ ಸಹಸಂಚಾಲಕ ಚಂದ್ರಶೇಖರ್ ಅವರು ಮಾತನಾಡಿ ೨೦೨೪ರಲ್ಲಿ ಮತ್ತೆ ನರೇಂದ್ರ ಮೋದಿಯವರೇ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಮೋದಿ ಮಾಡಿರುವ ಕೆಲಸವನ್ನು ಸಮಾಜಕ್ಕೆ ತಲುಪಿಸುವ ಬೈಕ್ ರ್ಯಾಲಿ ಮೂಲಕ ಮಾಡುತ್ತಿದ್ದೇವೆ. ಸೆ.೨೭ರಿಂದ ಕೋಲಾರದಿಂದ ನಮ್ಮ ರ್ಯಾಲಿ ಪ್ರಾರಂಭವಾಗಿದೆ. ಅ. ೧೩ಕ್ಕೆ ಬೆಂಗಳೂರಿನಲ್ಲಿ ಸಮಾರೋಪ ಆಗಲಿದೆ. ೨೦೧೩ರಲ್ಲಿ ಭ್ರಷ್ಟಾಚಾರ ಮಾಡಿಕೊಂಡಿದ್ದವರು ಇವತ್ತು ಒಂದಾಗಿ ಮೋದಿಯವರನ್ನು ಕೆಳಗಿಳಿಸಿ ಭಾರತದ ಅಧಿಕಾರ ಪಡೆಯಬೇಕೆಂಬ ಪ್ರಯತ್ನ ಮಾಡುವ ಸಂದರ್ಭದಲ್ಲಿ ನಾವು ಪುನಃ ಮೋದಿಯವರೇ ಪ್ರಧಾನಿಯಾಗಬೇಕೆಂದು ಪ್ರಚಾರ ಕೈಗೊಂಡಿದ್ದೇವೆ. ಮೋದಿ ೯ ವರ್ಷ ಮಾಡಿರುವ ಕೆಲಸ ಫಲಕೊಡುವ ಸಮಯ ಬಂದಿದೆ. ಇಂತಹ ಸಮಯದಲ್ಲಿ ಅವರ ಆಡಳಿತ ಇಲ್ಲದಿದ್ದರೆ ಮತ್ತೆ ನಾವು ೧೦೦ ವರ್ಷ ಹಿಂದೆ ಹೋಗುವ ಸಾಧ್ಯತೆ ಇದೆ. ಈ ನಿಟಿಟನಲ್ಲಿ ನರೇಂದ್ರ ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹೇಳಿದರು.
ಪುತ್ತೂರಿನಲ್ಲಿ ಆಗಮಿಸಿ ಬೈಕ್ ರ್ಯಾಲಿಯನ್ನು ಪುತ್ತೂರಿನ ಕಾರ್ಯಕರ್ತರು ಸ್ವಾಗತಿಸಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಲಕ್ಷಿö್ಮÃ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ರ್ಯಾಲಿಯಲ್ಲಿ ಬಂದ ೧೭ ಮಂದಿ ಸಹಿತ ಪುತ್ತೂರಿನ ಪ್ರಮುಖರಾದ ಮ್ಯಾನಜಿಂಗ್ ಟ್ರಷ್ಟಿ ಅಶೋಕ್ ಪ್ರಭು,ಚಂದ್ರಕಾಂತ್ ಭಟ್,ಕೇದಾರ್ ಪ್ರಭು,ಸುನೀತ್ ಭಟ್,ವಿಶ್ವಾಸ್ ಶೆಣೈ, ಮಣಿಕಂಠ, ನಿತಿನ್ ಕಲ್ಲೇಗ, ಕಿರಣ್ ಹೆಗ್ಗದೆ, ಮನೀಶ್ ಗೂನಡ್ಕ, ತ್ರಿಮುಖ್, ಚಂದ್ರಶೇಖರ್ ಎ.ಎಸ್, ಜಗದೀಶ್ ಶೆಣೈ, ಕಾರ್ತಿಕ್ ಭಕ್ತ, ಸಮಜಯ್ ಭಟ್, ನಿತಿನ್ ಶೆಣೈ, ರಾಮನಾಥ್ ಭಟ್, ಗಜಾನನ ಬಾಳಿಗ, ಅನಿಲ್ ನಾಯಕ್, ಗಣೇಶ್ ಕಾಮತ್ ಅವರು ಉಪಸ್ಥಿತರಿದ್ದರು. ಬಳಿಕ ರ್ಯಾಲಿಯನ್ನು ಬಿಳ್ಕೊಡಲಾಯಿತು.


