Friday, January 16, 2026
Flats for sale
Homeಜಿಲ್ಲೆಬಂಟ್ವಾಳ: ಕೌಟುಂಬಿಕ ಕಲಹ : ಬಾವಿಗೆ ಹಾರಿ ಪ್ರಾಣ ಬಿಟ್ಟ ಯುವಕ.

ಬಂಟ್ವಾಳ: ಕೌಟುಂಬಿಕ ಕಲಹ : ಬಾವಿಗೆ ಹಾರಿ ಪ್ರಾಣ ಬಿಟ್ಟ ಯುವಕ.

ಬಂಟ್ವಾಳ : ವಿಟ್ಲದ ಪೆರಾಜೆಯ ಯುವಕನೋರ್ವ ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಮೃತರನ್ನು ಪ್ರಶಾಂತ್ ನಾಯಕ್ (29) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹವೇ ಅವರ ಈ ಕ್ರಮಕ್ಕೆ ಕಾರಣ ಎನ್ನಲಾಗಿದೆ.

ನೇರಳಕಟ್ಟೆ ಅಗ್ರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಎಲ್ಲರೊಂದಿಗೆ ಸೌಹಾರ್ದಯುತವಾಗಿ ವರ್ತಿಸುತ್ತಿದ್ದ ಅವರು ಸಮಾಜದಲ್ಲಿ ಹೆಸರುವಾಸಿಯಾಗಿದ್ದರು.

ಪ್ರಶಾಂತ್ ಬಿಜೆಪಿಯ ಸಕ್ರಿಯ ಸದಸ್ಯರಾಗಿದ್ದರು ಮತ್ತು ಪೆರಾಜೆ ಯುವ ವೇದಿಕೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕೌಟುಂಬಿಕ ಕಲಹವೇ ಪ್ರಶಾಂತ್‌ನ ಈ ವಿಪರೀತ ನಡೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಗೂಡಿನಬಳ್ಳಿಯ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮುಳುಗು ತಜ್ಞರು ಆಗಮಿಸಿ ಮೃತದೇಹವನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular