ಬಂಟ್ವಾಳ : ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಯುವಕನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ನಡೆದಿದೆ.
ಇರಿತಕ್ಕೊಳಗಾದ ವ್ಯಕ್ತಿಯನ್ನು ಹಮೀದ್ ಯಾನೆ ಅಮ್ಮಿ ಎಂದು ತಿಳಿದುಬಂದಿದೆ.
ಈತ ಪೈಂಟರ್ ವೃತ್ತಿ ಮಾಡುತ್ತಿದ್ದು ರಸ್ತೆಯಲ್ಲಿ ನಿಂತಿರುವ ಸಂಧರ್ಭದಲ್ಲಿ ಚೂರಿ ಇರಿದಿದ್ದಾರೆ.ಹ್ಯಾರಿಸ್ ಮತ್ತು ತಂಡದಿಂದ ದಾಳಿ ನಡೆದಿರೋ ಸಾಧ್ಯತೆ ಎನ್ನಲಾಗಿದ್ದು ವೈಯಕ್ತಿಕ ಕಾರಣಕ್ಕೆ ದಾಳಿ ನಡೆದಿರೋ ಬಗ್ಗೆ ಮಾಹಿತಿ ದೊರೆತಿದೆ.
ಸುಹಾಸ್ ಹತ್ಯೆ ಯಿಂದ ಬುಗಿಲೆದ್ದಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜ ಸ್ಥಿತಿಗೆ ಮರಳಿದ್ದು ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿಯಬೇಕಾಗಿದೆ. ಇತನ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಥಳಕ್ಕೆ ಸ್ಥಳೀಯ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.