Saturday, July 25, 2026
Homeರಾಜ್ಯಬೆಂಗಳೂರು :‘ಗೃಹಜ್ಯೋತಿ’ ಜೊತೆಗೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ...

ಬೆಂಗಳೂರು :‘ಗೃಹಜ್ಯೋತಿ’ ಜೊತೆಗೆ ರಾಜ್ಯದ ಜನತೆಗೆ ಕರೆಂಟ್ ಶಾಕ್: ಜೂನ್ 1ರಿಂದಲೇ ವಿದ್ಯುತ್ ದರ ಏರಿಕೆ.

ಬೆಂಗಳೂರು: ‘ಗೃಹಜ್ಯೋತಿ’ ಘೋಷಣೆ ಬೆನ್ನಲ್ಲೇ ಜನತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್​ ನೀಡಿದ್ದು, ಜೂನ್ 1ರಿಂದಲೇ ವಿದ್ಯುತ್ ದರ (Electricity Price Hike) ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ (ಕೆಇಆರ್​ಸಿ) ರಾಜ್ಯದಲ್ಲಿ ಪ್ರತಿ ಯೂನಿಟ್​​ ವಿದ್ಯುತ್​ಗೆ 70 ಪೈಸೆ ಹೆಚ್ಚಳ ಮಾಡಿ ಮೇ 12ರಂದು ವಿದ್ಯುತ್ ದರ ಏರಿಕೆ ಮಾಡಿ ಆದೇಶ ಪ್ರಕಟಿಸಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ಹೆಚ್ಚಳಿಕೆ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ವಿದ್ಯುತ್​ ದರ ಜೂನ್ 1ರಿಂದಲೇ ಜಾರಿ ಆಗಲಿದೆ.

ಏಪ್ರಿಲ್ 1ರಿಂದ ಹೊಸ ದರ ಅನ್ವಯ ಎಂದು ಕೆಇಆರ್​ಸಿ ಹೇಳಿತ್ತು. ಚುನಾವಣೆ ಘೋಷಣೆ ಹಿನ್ನೆಲೆ ದರ ಹೆಚ್ಚಳ ಆದೇಶಕ್ಕೆ ತಡೆಬಿದ್ದಿತ್ತು. ಹಾಗಾಗಿ ಜೂ. 1ರಿಂದ ಪರಿಷ್ಕೃತ ವಿದ್ಯುತ್ ದರವನ್ನು ಕೆಇಆರ್​ಸಿ ಜಾರಿಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular