ಬೆಂಗಳೂರು:ರಾಜ್ಯದ ಕಾಂಗ್ರೆಸ್ ಪಕ್ಷದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪು ಇಂದು ಹೈಕೋರ್ಟ್ ತೀರ್ಪು ನೀಡಿದೆ. ಈ ನಡುವೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ, ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿದೆ.
ಇದೇ ವೇಳೆ ಮುಂದಿನ ಮೂರು ತಿಂಗಳವೊಳಗೆ ಪ್ರಕರಣದ ತನಿಖೆಯನ್ನು ಮುಗಿಸಬೇಕು ಅಂಥ ಸಿಬಿಐಗೆ ಸೂಚನೆ ನೀಡಿದೆ. ತನಿಖೆ ನಿಧಾವಾದರೆ ಮತ್ತೆ ಪುನಃ ಆದೇಶ ನೀಡಬೇಕಾಗುತ್ತದೆ ಅಂತ ಇದೇ ವೇಳೆ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.


