Wednesday, October 22, 2025
Flats for sale
Homeಕ್ರೈಂಬೆಂಗಳೂರು : ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಮನೆಯಲ್ಲಿ ಕಳ್ಳತನ.

ಬೆಂಗಳೂರು : ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಮನೆಯಲ್ಲಿ ಕಳ್ಳತನ.

ಬೆಂಗಳೂರು : ಬೆಂಗಳೂರಿನ ಚಂದ್ರಾಲೇಔಟ್​ನಲ್ಲಿರುವ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಸ್ತೂರಿ ಶೆಟ್ಟಿ ಅವರು 2023ರ ಡಿಸೆಂಬರ್​​ 31ರ ಮಧ್ಯಾಹ್ನ, ರೂಮ್‌ ಬೀರುವಿನಲ್ಲಿ 2.05 ಲಕ್ಷ ಹಣ ಇಟ್ಟಿದ್ದರು. ಆದರೆ ಈಗ ಆ ಹಣ ಕಾಣೆಯಾಗಿದೆ. ಮನೆ ಕೆಲಸದಾಕೆ ಮೇಲೆ ಅನುಮಾನಗೊಂಡು ಕಸ್ತೂರಿ ಶೆಟ್ಟಿ ಅವರು ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮನೆ ಕೆಲಸದಾಕೆ ರತ್ನಮ್ಮ ಅವರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ರತ್ನಮ್ಮ ಕಳೆದ ಆರು ತಿಂಗಳಿನಿಂದ ಕಸ್ತೂರಿ ಶೆಟ್ಟಿ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದಿದೆ.

ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು ,ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular