ಬೆಳಗಾವಿ : ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮಕ್ಕೆ ಸಚಿವ ಸಂತೋಷ ಲಾಡ್ ಭೇಟಿ.ನಯಾನಗರ ಗ್ರಾಮದ ಸುಖದೇವಾನಂದಮಠದ ಕಾರ್ಯಕ್ರಮದಲ್ಲಿ ಭಾಗಿಯಾದರು.
ಬೈಲಹೊಂಗಲ ತಾಲೂಕಿನ ನಯಾನಗರ ಗ್ರಾಮದ ಸುಖದೇವಾನಂದಮಠದಲ್ಲಿ ಒಂದು ತಿಂಗಳ ಪರ್ಯಂತ ನಡೆದ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮದ ಮುಕ್ತಾಯ ಸಮಾರಂಭ ನಡೆಯಿತು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿ, ‘ಪುರಾಣ, ಪ್ರವಚನಗಳು ಮನುಷ್ಯನ ಮನಸ್ಸನ್ನು ಪ್ರಪುಲ್ ಗೊಳಿಸುತ್ತವೆ. ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುತ್ತವೆ’ ಎಂದರು.
ಸುಖದೇವಾನಂದಮಠದ ಅಭಿನವ ಸಿದ್ಧಲಿಂಗ ಸ್ವಾಮೀಜಿ ನೇತೃತ್ವವಹಿಸಿದ್ದರು. ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ, ಸೋಮೇಶ್ವರ ಕಾರ್ಖಾನೆ ನಿರ್ದೇಶಕರಾದ ರಾಜು ಕುಡಸೋಮಣ್ಣವರ, ಮಹಾಂತೇಶ ಮತ್ತಿಕೊಪ್ಪ,
ಜೆಡಿಎಸ್ ಮುಖಂಡ ಶಂಕರ ಮಾಡಲಗಿ, ತವನಪ್ಪ ಅಷ್ಟಗಿ, ಶಿವಾನಂದ ಕೌಜಲಗಿ, ದ್ಯಾಮನ್ನ ರೇವನಕರ ಸೇರಿದಂತೆ ಹಲವು ನಾಯಕರು, ಮುಖಂಡರು, ಮಠದ ಸದ್ಭಕ್ತರು ಇದ್ದರು.


