Thursday, September 18, 2025
Flats for sale
Homeರಾಜಕೀಯಬೆಳಗಾವಿ ; ರಾಜಕೀಯ ಭವಿಷ್ಯಕ್ಕಾಗಿ ಬೆಂಗಳೂರಿಗೆ ಹೊರಟ ಲಕ್ಷ್ಮಣ್ ಸವದಿ.

ಬೆಳಗಾವಿ ; ರಾಜಕೀಯ ಭವಿಷ್ಯಕ್ಕಾಗಿ ಬೆಂಗಳೂರಿಗೆ ಹೊರಟ ಲಕ್ಷ್ಮಣ್ ಸವದಿ.

ಬೆಳಗಾವಿ ; ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಮತ್ತು ಎಂಎಲ್‌ಸಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಅವರು ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಂಗಳೂರಿನತ್ತ ಸಾಗಿದರು, ಅವರ ರಾಜಕೀಯ ಭವಿಷ್ಯವು ತೂಗುಯ್ಯಾಲೆಯಲ್ಲಿದೆ.

ಕೆಪಿಸಿಸಿ ವಕ್ತಾರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ, ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ಅವರು ಸವದಿ ಅವರು ರಾಜ್ಯ ರಾಜಧಾನಿಗೆ ತೆರಳುವಾಗ ಜೊತೆಗಿದ್ದರು.

ಸವದಿ ಅವರು ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ಮತ್ತು ತಮ್ಮ ಆಯ್ಕೆಯ ಪಕ್ಷಕ್ಕೆ ಸೇರುವುದಾಗಿ ಅಥವಾ ಅಥಣಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular