Tuesday, October 21, 2025
Flats for sale
Homeಜಿಲ್ಲೆಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು.

ಬೆಳ್ತಂಗಡಿ : ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು.

ಬೆಳ್ತಂಗಡಿ : ಸುಮಾರು ಬೆಳಿಗ್ಗೆ 11 ರಿಂದ 12 ಗಂಟೆಯ ಅವಧಿಯಲ್ಲಿ, ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ (60) ಎಂಬವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೃತದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular