Thursday, March 12, 2026
Flats for sale
Homeಜಿಲ್ಲೆಮಂಗಳೂರು : ಅಡ್ಯಾರ್ ಬಳಿ ಟಿಪ್ಪರ್-ಸ್ಕೂಟರ್ ಡಿಕ್ಕಿ,ಹಿಂಬದಿ ಸವಾರ ಸಾವು.

ಮಂಗಳೂರು : ಅಡ್ಯಾರ್ ಬಳಿ ಟಿಪ್ಪರ್-ಸ್ಕೂಟರ್ ಡಿಕ್ಕಿ,ಹಿಂಬದಿ ಸವಾರ ಸಾವು.

ಮಂಗಳೂರು : ಟಿಪ್ಪರ್ ಲಾರಿ ಮತ್ತು ಸ್ಕೂಟರ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರು ಸಮೀಪದ ಅಡ್ಯಾರ್ ಎಂಬಲ್ಲಿ ಶನಿವಾರ ಈ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರ್ಫುದೀನ್ (16) ಎಂದು ಗುರುತಿಸಲಾಗಿದೆ. ಈತ ನಗರದ ಮಿಲಾಗ್ರಿಸ್ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ.

ಸ್ನೇಹಿತನೊಂದಿಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಶರ್ಫುದೀನ್ ರಸ್ತೆಗೆ ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ಶರ್ಫುದ್ದೀನ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಯತ್ನಗಳ ಹೊರತಾಗಿಯೂ, ವೈದ್ಯಕೀಯ ಚಿಕಿತ್ಸೆಯು ಮಾರಣಾಂತಿಕ ಗಾಯಗಳಿಂದ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

ಅಪಘಾತದಲ್ಲಿ ಮತ್ತೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular