Saturday, July 25, 2026
Homeಜಿಲ್ಲೆಮಂಗಳೂರು : ಅಯೋಧ್ಯೆ ರಾಮಮಂದಿರಕ್ಕೆ ಬೆಳ್ಳಿಯ ಪಲ್ಲಕ್ಕಿಯನ್ನು ಕೊಡುಗೆಯಾಗಿ ನೀಡಿದ ಕಾಶಿ ಮಠ.

ಮಂಗಳೂರು : ಅಯೋಧ್ಯೆ ರಾಮಮಂದಿರಕ್ಕೆ ಬೆಳ್ಳಿಯ ಪಲ್ಲಕ್ಕಿಯನ್ನು ಕೊಡುಗೆಯಾಗಿ ನೀಡಿದ ಕಾಶಿ ಮಠ.

ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನವು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬೆಳ್ಳಿಯ ಪಲ್ಲಕ್ಕಿಯನ್ನು ಕೊಡುಗೆಯಾಗಿ ನೀಡುತ್ತಿದೆ. ಈ ನಿಟ್ಟಿನಲ್ಲಿ ಕಾರ್‌ಸ್ಟ್ರೀಟ್‌ನಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪಲ್ಲಕ್ಕಿಯ ಪುರ ಪ್ರವೇಶ ಫೆ.3, ಶನಿವಾರ ನಡೆಯಲಿದೆ.

ಇಂದು ಸಂಜೆ 6 ಗಂಟೆಗೆ ದೇವಸ್ಥಾನದ ಬಳಿಯಿಂದ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಹೊರತರಲಾಗುವುದು. ಮೆರವಣಿಗೆಯು ಮಹಾಮಾಯಾ ದೇವಸ್ಥಾನ, ಚಿತ್ರಾ ಜಂಕ್ಷನ್ ಮೂಲಕ ಸಾಗಿ ಕಾರ್ಸ್ಟ್ರೀಟ್ ತಲುಪಲಿದೆ.

ನಂತರ ಶೋಭಾ ಯಾತ್ರೆಯು ಕಾಶಿ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ನಡೆಯಲಿದೆ. ನಂತರ ರಾತ್ರಿ ಪೂಜೆ ನಡೆಯಲಿದ್ದು, ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular