Friday, March 13, 2026
Flats for sale
Homeಜಿಲ್ಲೆಮಂಗಳೂರು : ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ : ಯುವಕ-ಯುವತಿ ಸಾವು.

ಮಂಗಳೂರು : ಅಸೈಗೋಳಿಯಲ್ಲಿ ಭೀಕರ ರಸ್ತೆ ಅಪಘಾತ : ಯುವಕ-ಯುವತಿ ಸಾವು.

ಮಂಗಳೂರು : ಮಂಜನಾಡಿ ನಾಟೆಕಲ್ ಸಮೀಪ ನಿನ್ನೆ ಮದ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂಬದಿ ಸವಾರಳಾಗಿದ್ದ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಚಲಾಯಿಸುತ್ತಿದ್ದ ಯುವಕ ಗಂಭೀರ ಗಾಯಗೊಂಡಿದ್ದು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ವರದಿಯಾಗಿದೆ.

ಬೋಂದೇಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಸ್ ನಿಲ್ದಾಣ ಬಳಿಯ ನಿವಾಸಿ ಶ್ರೀ ನಿಧಿ (29) ಸಾವನ್ನಪ್ಪಿದವರು. ದೀಕ್ಷಿತ್ ನಿಂದ ನಿಧಿ ವಿಚ್ಛೇದನ ಪಡೆದಿದ್ದರು ಎಂದು ತಿಳಿದುಬಂದಿದೆ. ಬೈಕ್ ಚಲಾಯಿಸುತ್ತಿದ್ದ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಇದೀಗ ಮೃತಪಟ್ಟಿದ್ದಾರೆ .ಅತೀವೇಗದಿಂದ ಬೈಕ್ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಅಪಘಾತ ಸಂಭವಿಸಿದೆ. ನಿಧಿ ಸಾವನ್ನಪ್ಪಿದ್ದು ಯತೀಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ . ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಧಿಗೆ ಇಬ್ಬರು ಮಕ್ಕಳಿದ್ದು ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು,ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular