ಮಂಗಳೂರು : ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎನ್ನಲಾಗಿದೆ. ಅಸಲಿಗೆ ಚಿತ್ತರಂಜನ್ ಶೆಟ್ಟಿ ಅವರ ಕಿಸೆಯಲ್ಲಿದ್ದ ಪಿಸ್ತೂಲ್ ನಿಂದ ಈ ಫೈರಿಂಗ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಸ್ವಂತ ಭದ್ರತೆಗಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ಸರಿಯಾಗಿ ಲಾಕ್ ಮಾಡದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಖಾಸಗಿ ಆಸ್ಪತ್ರೆಗೆ ಕೊಂಡ್ಯೋಯಲಾಗಿದೆ.


