ಮಂಗಳೂರು : ಸೀನಿಮೀಯ ರೀತಿಯಲ್ಲಿ ಮದುವೆ ಮಂಟಪಕ್ಕೆ ಪೊಲೀಸರೊಂದಿಗೆ ಎಂಟ್ರಿಕೊಟ್ಟು ಮಾಜಿ ಪ್ರೇಯಸಿ ಜಗಳವಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ತನ್ನಗೆ ಮೋಸ ಮಾಡಿ ಬೇರೊಬ್ಬಳೊಂದಿಗೆ ಮದುವೆಯಾಗುತ್ತಿನೇ ಎಂದು ಮದುವೆ ಸಮಾರಂಭವನ್ನು ನಿಲ್ಲಿಸಿದ ಘಟನೆ ನಡೆದಿದೆ.
ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದ ಮೈಸೂರಿನ ಯುವತಿಯನ್ನು ಕೇರಳದ ಕೊಝಿಕ್ಕೋಡ್ ಮೂಲದ ಅಕ್ಷಯ್ ಒಂದೂವರೆ ವರ್ಷದ ಹಿಂದೆ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ. ಎಂದು ಮಾಜಿ ಪ್ರೇಯಸಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.
ಕೊನೆಯ ಕ್ಷಣದಲ್ಲಿ ಮಂಗಳೂರಿನ ಯುವತಿ ಜೊತೆ ಅಕ್ಷಯ್ಗೆ ವಿವಾಹ ನಿಶ್ಚಯವಾಗಿದೆ. ಕರ್ನಾಟಕದ-ಕೇರಳ ಗಡಿಭಾಗ ಬೀರಿಯ ಖಾಸಗಿ ಹಾಲ್ನಲ್ಲಿ ಮದುವೆ ನಡೆಯುತ್ತಿರುವ ವಿಚಾರ ತಿಳಿದು ಉಳ್ಳಾಲ ಪೊಲೀಸರೊಂದಿಗೆ ಆಗಮಿಸಿ ಹಾಲ್ ಮುಂಭಾಗದಲ್ಲಿ ಹೈಡ್ರಾಮ ನಡೆಸಿದ್ದಾಳೆ.
ಕ್ಲೈಮಾಕ್ಸ್ ಅಲ್ಲಿ ಸಿನಿಮಾದ ರೀತಿ ಅಕ್ಷಯ್ ಮಂಗಳೂರು ಯುವತಿಗೆ ತಾಳಿ ಕಟ್ಟಿದ್ದಾನೆ. ಆರೋಪಿಯನ್ನು ಅರೆಸ್ಟ್ ಮಾಡಿ ಅಂದರೆ ನನ್ನನ್ನೇ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಯುವತಿ ಆಕ್ರೋಶ ಹೊರಹಾಕಿದ್ದಾಳೆ.


